ಸೌಜನ್ಯ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸಿಎಮ್, ದೊಡ್ಡ ಮನುಷ್ಯನಿಗೆ ನಡುಕ ಶುರು
Jul 19, 2025, 09:44 IST
ವೀಕ್ಷಕರೇ... ಕಳೆದ ಕೆಲ ದಿನಗಳಿಂದ ಎಲ್ಲಲ್ಲೂ ಧರ್ಮಸ್ಥಳದ್ದೇ ಸುದ್ದಿ ಹೌದು ಈ ಹಿಂದೆ ಸೌಜನ್ಯ ಕುರಿತಾಗಿ ಸುದ್ದಿಯಾದರೆ ಇದೀಗ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಸ್ನೇಹಿತರೊಂದಿಗೆ ಧರ್ಮಸ್ಥಳಕ್ಕೆ ಹೋಗಿದ್ದಳು.
ಅಲ್ಲಿ ಕಾಣೆಯಾಗಿದ್ದಳು ಇದೀಗ ಅನನ್ಯ ಭಟ್ ಕುರಿತಾಗಿ ತಾಯಿ ಸುಜಾತ ಭಟ್ ಪ್ರಕರಣ ದಾಖಲಿಸಿರೋದು ವೈರಲ್ ಆಗಿದೆ.ಅಲ್ಲದೆ ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಕುರಿತಾಗಿ ಎಲ್ಲರ ಗಮನ ಸೆಳೆದಿದೆ.ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಈಗ ನನಗೆ ನೆಮ್ಮದಿಯಿಲ್ಲ ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ.
<a href=https://youtube.com/embed/Hnb9u0liUik?autoplay=1&mute=1><img src=https://img.youtube.com/vi/Hnb9u0liUik/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಈ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು ಅಸಹಜ ಸಾವುಗಳ ಕುರಿತು ಎಸ್ಐಟಿ ತನಿಖೆಗೆ ಮನವಿ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಅಷ್ಟೇ ಅಲ್ಲ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗ ಕೂಡ ಮನವಿ ಮಾಡಿತ್ತು ಆದ್ರೆ ಇದೀಗ ಸದ್ಯಕ್ಕೆ ಎಸ್ಐಟಿ ರಚನೆ ಮಾಡುವುದಿಲ್ಲ ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡೋದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ಧರ್ಮಸ್ಥಳ ಸರಣಿ ಕೊಲೆ ಪ್ರಕರಣಕ್ಕೆ ಹಳ್ಳ ಹಿಡಿಸುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ.