ಕೋಟ್ಯಾಂತರ ಅಭಿಮಾನಿಗಳ ನೆಚ್ಚಿನ ನಟನ ಮೇಲೆ ಕೇಸ್ ದಾಖಲು

 | 
Bs

ನಟ ನಿರ್ದೇಶಕ ಉಪೇಂದ್ರ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು ಆದರೆ ಈ ಬಾರಿ ಸಿನಿಮಾದ ಕಾರಣದಿಂದಾಗಿ ಅಲ್ಲ. ಬದಲಾಗಿ ತಮ್ಮ ಹೇಳಿಕೆಯಿಂದ .
ಸ್ಯಾಂಡಲ್‌ವುಟ್‌ ನಟ, ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ ಎಂಬ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. 

ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇನ್ನೋಸೆಂಟ್‌ ಹೃದಯಗಳಿಂದಲೇ ನಿಜವಾದ ಬದಲಾವಣೆ ಸಾಧ್ಯ. ಇನ್ನೋಸೆಂಟ್‌ ಅಂದರೆ ಮುಗ್ಧತೆ ಇದೆಯಲ್ಲಾ ಅದೇ ಸತ್ಯದ ಮನಸ್ಸು. ಇನ್ನೋಸೆಂಟ್‌ ಮನಸ್ಸುಗಳು ಇಲ್ಲಿ ಜಾಯಿನ್‌ ಆಗಲಿ ಮಾತನಾಡಲಿ, ಹೇಳುವುದಕ್ಕೆ ಇಷ್ಟಪಡ್ತೀನಿ. ಅವರಿಂದ ನಮಗೆ ತುಂಬಾ ಬೆನಿಫಿಟ್‌ ಇದೆ, ಸಜೆಷನ್‌ ಕೂಡ ಉತ್ತಮವಾಗಿರುತ್ತದೆ. 

ಏನೋ ಒಂದು ಕೇರ್‌ಲೆಸ್‌ ಆಗಿ ಏನೋ ಒಂದು ಸಜೆಸ್ಟ್‌ ಮಾಡೋಣ, ಕೇರ್‌ಲೆಸ್‌ಆಗಿ ಅವಹೇಳನ ಮಾಡುವುದಾಗಲಿ, ಏನೋ ನಾವು ಮಾತನಾಡಬೇಕು ಟೈಮ್‌ ಇದೆ ಎಂದು ಬಾಯಿಗೆ ಬಂದಂತೆ ಕಮೆಂಟ್‌ ಮಾಡೋಣ ಎನ್ನುವವರೂ ಇದ್ದಾರೆ. ಅಂತಹವರನ್ನ ಬಿಡಿ, ಅವರನ್ನು ಏನೂ ಮಾಡೋಕೆ ಆಗಲ್ಲ.ಊರು ಎಂದಮೇಲೆ ಹೊಲೆಗೇರಿ ಇರುತ್ತ, ಆ ತರಹ ಇಂಥವರೂ ಇರುತ್ತಾರೆ ಜಗತ್ತಲ್ಲಿ ಏನೂ ಮಾಡೋಕಾಗಲ್ಲ. ಅವರನ್ನೆಲ್ಲಾ ಬಿಟ್ಟಾಕೋಣ ಅದನ್ನು ಓದೋದು ಬೇಡ ನಾವು. 

ಸ್ವಲ್ಪ ನಾವು ಹೇಳ್ತಿರೋದು ಇಂಥ ಒಂದು ಪ್ಯೂರ್‌ ಜನರನ್ನ ಪ್ರೀತಿಸೋವಂಥದ್ದು, ಜನರನ್ನು ಪ್ರೀತಿಸುವುದೇ ಜನಾರ್ಧನನ ಪೂಜೆ ಎನ್ನುತ್ತಾರೆ. ಜನರನ್ನು ಪ್ರೀತಿಸುವುದೇ ದೇಶಪ್ರೇಮ ಎನ್ನುತ್ತಾರೆ ಎಂದು ಮಾತನಾಡಿದ್ದಾರೆ. ಇನ್ನು ಉಪೇಂದ್ರ ಮಾತನಾಡಿರುವ ಮಾತಿನಿಂದ ದಲಿತ ಸಮಾಜದಲ್ಲಿನ ಜಾತಿ ಭಾವನೆಗೆ ಘಾಸಿ ಉಂಟಾಗಿದೆ. ಆದ್ದರಿಂದ ಉಪೇಂದರ ಅವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸಮತಾ ಸೈನಿಕ ದಳದ ಮುಖಂಡರು ಪತ್ರಮುಖೇನ ಸಾಮಾಜ ಕಲ್ಯಾಣ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ. 

ಇನ್ನು ವಿಡಿಯೋ ಕ್ಲಿಪ್‌ ಅನ್ನು ನೋಡಲಾಗಿ, ಮನವಿ ಪತ್ರದಲ್ಲಿ ಸತ್ಯಾಂಶ ಇದ್ದುದರಿಂದ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ನಟನಾಗಿರುವ ಉಪೇಂದ್ರ ಅವರು ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ಈಗ ಅವರ ಹೇಳಿಕೆಯನ್ನು ಕೆಲವರು ಅನುಕರಣೆ ಮಾಡಿದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಜಾತಿನಿಂದನೆ ಆರೋಪದಡಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.