ಕುಂದಾಪುರದ ಕಡಲ ಮೀನಿನಂತೆ ಕಂಗೊಳಿಸಿದ ಚೈತ್ರ ಕುಂದಾಪುರ, ಫಿದಾ ಆದ ಕರುನಾಡು

 | 
Bjj
ಹಿಂದೂ ಪರ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ, 'ಬಿಗ್ ಬಾಸ್‌' ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಹುಡುಗ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಅವರ ಸಪ್ತಪದಿ ತುಳಿದಿದ್ದಾರೆ. ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಚೈತ್ರಾ ಕುಂದಾಪುರ ಅವರಿಗೆ ಆಪ್ತರು, ಅಭಿಮಾನಿಗಳು, ಸ್ನೇಹಿತರು ಶುಭಾಶಯಗಳನ್ನು ತಿಳಿಸಿದ್ದಾರೆ.
ಶ್ರೀಕಾಂತ್ ಕಶ್ಯಪ್ ಮತ್ತು ಚೈತ್ರಾ ಕುಂದಾಪುರ ಕಳೆದ 12 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಹಿರಿಯಡ್ಕ ಮೂಲದ ಶ್ರೀಕಾಂತ್ ಕಶ್ಯಪ್ ಅವರು ಆನಿಮೇಷನ್‌ ವಿಷಯದಲ್ಲಿ ಓದಿಕೊಂಡಿದ್ದಾರೆ. ಒಟ್ಟಿಗೆ ಓದಿರುವ ಇವರು ಒಂದೇ ನ್ಯೂಸ್ ಚಾನೆಲ್‌ನಲ್ಲಿ ಕೆಲಸ ಮಾಡಿದ್ದಾರೆ. ಚೈತ್ರಾ ಕುಂದಾಪುರ ನಿರೂಪಕಿಯಾಗಿದ್ದರೆ, ಶ್ರೀಕಾಂತ್ ವಿಡಿಯೋ ಎಡಿಟರ್ ಆಗಿದ್ದರು. ಸದ್ಯ ಅದನ್ನೆಲ್ಲಾ ಬಿಟ್ಟು ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣಿತಿಯನ್ನು ಪಡೆದುಕೊಂಡಿದ್ದಾರೆ.
12 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ ಚೈತ್ರಾ ಕುಂದಾಪುರ - ಶ್ರೀಕಾಂತ್ ಕಶ್ಯಪ್‌ ಇದೀಗ ಕುಟುಂಬಸ್ಥರ ಸಮ್ಮತಿ ಪಡೆದು ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಮೇ 9ರಂದು ಇವರ ಮದುವೆಯು ಬಹಳ ಶಾಸ್ತ್ರೋಕ್ತವಾಗಿ ನಡೆದಿದೆ. ಕುಂದಾಪುರದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ಅವರ ಮದುವೆ ನಡೆದಿದೆ.
ಇನ್ನು, ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿದ್ದ ರಜತ್ ಬುಜ್ಜಿ ಕೂಡ ಚೈತ್ರಾ ಕುಂದಾಪುರ ಮದುವೆಯಲ್ಲಿ ಇದ್ದರು. ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ಕಾರ್ಯಗಳನ್ನು ನಡೆಸಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ರಜತ್ ಕಾಲಿಗೆ ಬಿದ್ದು ಚೈತ್ರಾ ಕುಂದಾಪುರ ಆಶೀರ್ವಾದ ಪಡೆದುಕೊಂಡಿದ್ದು ಎಲ್ಲರ ಗಮನವನ್ನು ಸೆಳೆಯಿತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.