ಬಿಗ್ ಬಾಸ್ ಕಾರ್ಯಕ್ರಮಗಳ ಕಚಡ ಕೆಲಸಕ್ಕೆ ಕಮಿಷನರ್ ಬಳಿ ದೂರು

 | 
ರಗ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ರಿಯಾಲಿಟಿ ಶೋ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಶೋ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲರಾದ ಕೆವಿ ಪ್ರವೀಣ ಎಂಬುವವರು  ದೂರು ದಾಖಲಿಸಿದ್ದಾರೆ. 

ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಭಾರತೀಯ ಮಾಧ್ಯಮ ನಿಯಂತ್ರಣ ಪ್ರಾಧಿಕಾರಕ್ಕೆ ಇಮೇಲ್ ಹಾಗೂ ಅಂಚೆ ಮೂಲಕ ದೂರು ನೀಡಲಾಗಿದೆ.ಈ ಕಾರ್ಯಕ್ರಮವು ತೀರ ನೈತಿಕ ಗುಣಮಟ್ಟವನ್ನು ಕಳೆದುಕೊಂಡಿದೆ. ಅಶ್ಲೀಲ ಪದ ಮತ್ತು ಚಪ್ಪಲಿಯಿಂದ ಹೊಡೆದಾಡುವ ದೃಶ್ಯಗಳು, ಬೆದರಿಕೆ ಹಾಕುತ್ತಿರುವುದು ಸ್ಪರ್ಧಿಗಳ ನಡುವೆ ಬಿತ್ತರಗೊಳ್ಳುತ್ತಿವೆ. ಇದು ಕೌಟುಂಬಿಕ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನೊಂದೆಡೆ ವ ಬಿಗ್ ಬಾಸ್ ಸ್ವರ್ಧಿಗಳ ವರ್ತನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಕೆಲ ಸ್ಫರ್ಧಿ‌ಗಳ ಅತಿರೇಕದ ವರ್ತನೆ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಹಲವು ಮಂದಿ ಟ್ವಿಟರ್ ನಲ್ಲಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಟಾಸ್ಕ್ ವೇಳೆ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಹಾನಿಯಾಗಿದೆ. ಈ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ ಅಂತ ಜನ ಆಗ್ರಹಿಸಿದ್ದಾರೆ. 

ಇದರ ಜೊತೆಗೆ ಬಿಗ್ ಬಾಸ್ ಸ್ವರ್ಧಿ ವಿನಯ್ ಗೌಡ ಇತರೆ ಸ್ವರ್ಧಿಗಳಿಗೆ ನೇರವಾಗಿ ಬೆದರಿಕೆ ಹಾಕ್ತಿದ್ದಾರೆ. ಸೆಕ್ಷನ್ 506 ಪ್ರಕಾರ ಸುಮೋಟೊ ಕೇಸ್ ಹಾಕುವಂತೆ ಟ್ವಿಟ್ ಮೂಲಕ‌ ಮನವಿ ಮಾಡಲಾಗುತ್ತಿದೆ. ಇನ್ನೂ ಕೆಲವು ಸ್ಪರ್ಧಿಗಳಿಂದ ವೈಲೆನ್ಸ್ ಆಗ್ತಿದೆ ಅಂತಲೂ ಕಿಡಿಕಾರಲಾಗಿದೆ. ಇತರ ಸ್ವರ್ಧಿಗಳ ಮುಖಕ್ಕೆ ಡಿಟರ್ಜೆಂಟ್‌ ಮಿಶ್ರಿತ ನೀರು ಹಾಕಲಾಗಿದೆ. ಕಾರ್ಯಕ್ರಮದ ಮೂಲ ಆಶಯ ಹಾಳಾಗದಿರಲಿ. ಸ್ಪರ್ಧಿಗಳ ವ್ಯಕ್ತಿತ್ವ ಸಂರಕ್ಷಣೆ ಆಗಲಿ. 

ಎಲ್ಲೆ ಮೀರಿದ ವರ್ತನೆಯಿಂದ ಬಿಗ್ ಬಾಸ್ ಮುಂದುವರೆಯುತ್ತಿದೆ. ಜೀವ ಬೆದರಿಕೆ ದಮ್ಕಿ ಸೇರಿ ವಿವಿಧ ರೀತಿ ಹಲ್ಲೆ ನಡೆಯುವ ಯತ್ನ ಆಗ್ತಿದೆ. ದಯವಿಟ್ಟು ಕಣ್ಣಿಡಿ ಅಂತ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗುತ್ತಿದೆ.ಈ ಕೆಟ್ಟ ಶೋ ನಿಂದ  ಸುದೀಪ್ ಸರ್ ಹೊರ ಬನ್ನಿ. ನಿಮ್ಮ ವ್ಯಕ್ತಿತ್ವಕ್ಕೆ ದಕ್ಕೆಯಾಗುತ್ತಿದೆ. ಇಂತಹ ಶೋ ನಡೆಸಿಕೊಡಬೇಡಿ ಅಂತ ಸಾರ್ವಜನಿಕರು. ಅಭಿಮಾನಿಗಳು  ಕಿಚ್ಚನಿಗೆ ಮನವಿ ಮಾಡುತ್ತಿದ್ದಾರೆ. ಕಿಚ್ಚನ ವ್ಯಕ್ತಿತ್ವಕ್ಕೆ ಯಾವುದೇ ಕಾರಣಕ್ಕೆ ಧಕ್ಕೆಯಾಗದಿರಲಿ ಎಂದು ಹಲವರು ಪ್ರಾರ್ಥಿಸುತ್ತಿದ್ದಾರೆ.

ನಾನು ಮತ್ತೆ ಹೇಳ್ತಿದ್ದೀನಿ ದಯವಿಟ್ಟು ಮನೆಗಳಲ್ಲಿ ಸಣ್ಣ ಮಕ್ಕಳು ಇದ್ದರೆ ಈ ಬಿಗ್ ಬಾಸ್ ನೋಡಲೇಬೇಡಿ. ಈ ಹಿಂದಿನ ಸೀಸನ್ ಗಳು ಅದ್ಭುತ, ಇದೊಂದು ಸೀಸನ್ ಹಲವರ ಮನಸ್ಥಿತಿ ಹಾಳು ಮಾಡ್ತಿದೆ. ಬಿಗ್ ಬಾಸ್ ವೇದಿಕೆ ಎಷ್ಟೋ ಜನರ ಕನಸು. ಆದ್ರೆ ಎಲ್ಲೆ ಮೀರಿದ ವರ್ತನೆ ಇದು. ಅಬ್ಬಬ್ಬಾ ಅದೇನು ಜೀವ ಬೆದರಿಕೆ, @BlrCityPolice ಕಣ್ಣಿಡಿ ಎಂದು ಚೇತನ ಸೂರ್ಯ ಎಂಬುವವರು ಟ್ವೀಟ್ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.