ಆ ವ್ಯವಹಾರ ಮಾಡುವ ಮುನ್ನ ದಿವ್ಯಾ ವಸಂತ ಡಿಮಾಂಡ್

 | 
He
ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ಗಿಚ್ಚಿ ಗಿಲಿಗಿಲಿ ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿದೆ. ವಾಮಮಾರ್ಗದಲ್ಲಿ ಹಣ ಗಳಿಸಲು ಹೋಗಿ ದಿವ್ಯಾ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಮೊದಲಿಗೆ ಸುದ್ದಿ ವಾಹಿನಿಯ ನಿರೂಪಕಿಯಾಗಿ ಗಮನ ಸೆಳೆದಿದ್ದ ಆಕೆ ಬಳಿಕ ಇನ್‌ಸ್ಟಾಗ್ರಾಂ ರೀಲ್ಸ್, ಯೂಟ್ಯೂಬ್ ವೀಡಿಯೋಗಳಿಂದ ಸದ್ದು ಮಾಡಿದ್ದಳು.
ಜೆ. ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಪಾವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಾಜ್‌ನ್ಯೂಸ್ ಸುದ್ದಿವಾಹಿನಿ ಸಿಇಓ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ದಿವ್ಯಾ ಸಂತ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವೆಂಕಟೇಶ್ ಹಾಗೂ ದಿವ್ಯಾ ಸೇರಿ ಸ್ಪೈ ರೀಸರ್ಚ್ ಟೀಂ ಹೆಸರಿನ ವಾಟ್ಸಪ್‌ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು ಎಂದು ವರದಿಯಾಗಿದೆ. ತಮ್ಮ ಡೀಲ್, ಪ್ಲ್ಯಾನ್‌ಗಳ ಬಗ್ಗೆ ಇದೇ ಗ್ರೂಪ್‌ನಲ್ಲಿ ಆರೋಪಿಗಳು ಚರ್ಚಿಸುತ್ತಿದ್ದರು ಎನ್ನಲಾಗಿದೆ. ಖಾಸಗಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಿವ್ಯಾ ಕೆಲ ದಿನಗಳ ಹಿಂದೆ ಕೆಲಸ ಬಿಟ್ಟಿದ್ದಳು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಳು. ರ್ಯಾಪ್ ಸಾಂಗ್ಸ್ ಮಾಡಿ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಳು.
ಸುದ್ದಿ ವಾಹಿನಿಯಲ್ಲಿ 15ರಿಂದ 20 ಸಾವಿರ ಸಂಬಳ ಸಿಗುತ್ತಿತ್ತು. ರಿಯಾಲಿಟಿ ಶೋನಿಂದ ವಾರಕ್ಕೆ ಐರಾರು ಸಾವಿರ ಸಿಗುತ್ತಿತ್ತು. ಮಧ್ಯಮವರ್ಗದ ಕುಟುಂಬದಿಂದ ಬಂದ ದಿವ್ಯಾ ಶೋಕಿಗೆ ಬಿದ್ದು ಐಷಾರಾಮಿ ಜೀವನಕ್ಕಾಗಿ ಸುಲಿಗೆಕೋರರ ಜೊತೆ ಕೈ ಜೋಡಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ತನ್ನ ಯೂಟ್ಯೂಬ್ ಚಾನಲ್‌ಗೆ ನಿರೂಪಕಿಯಾಗಿ ದಿವ್ಯಾಳನ್ನು ವೆಂಕಟೇಶ್ ಪರಿಚಯಿಸಿಕೊಂಡಿದ್ದ. ಅದೇ ಸಲುಗೆಯಿಂದ ಇಬ್ಬರು ಅಮಾಯಕ ಸುಲಿಗೆ ಮಾಡಲು ಆರಂಭಿಸಿದ್ದರು.
ಶ್ರೀಮಂತರು, ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದ್ದರು. ಹನಿಟ್ರ್ಯಾಪ್ ರೀತಿ ಹಣವುಳ್ಳವರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. 100ಕ್ಕೂ ಹೆಚ್ಚು ಜನರನ್ನು ವೆಂಕಟೇಶ್ ಹಾಗೂ ದಿವ್ಯಾ ತಂಡ ಸುಲಿಗೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಆನ್‌ಲೈನ್‌ನಲ್ಲಿ ಇವರಿಬ್ಬರ ಖಾತೆಗಳಿಗೆ 50 ಸಾವಿರದಿಂದ 1 ಲಕ್ಷದವರೆಗೆ ಹಣ ವರ್ಗಾವಣೆಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.