FactCheck:ಸುಹಾನ್ ಶೆಟ್ಟಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಅಸಲಿಯತ್ತು ಇಲ್ಲಿದೆ
May 3, 2025, 15:03 IST
|

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಕರಾವಳಿ ಬೂದಿ ಮುಚ್ಚಿದ ಕೆಂಡವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಆರು ಜನ ಇದ್ದ ಸಮಯದಲ್ಲೂ ಸಿನಿಮಾ ಮಾದರಿಯಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಇದನ್ನು ಹಿಂದೂ ಸಮಾಜ ಸಹಿಸಿಕೊಂಡು ಕೂರಲ್ಲ. ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರವನ್ನು ನೀಡುತ್ತೇವೆ. ಈ ಹತ್ಯೆಯ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ಹೊತ್ತುಕೊಳ್ಳಬೇಕಾಗುತ್ತದೆ.
ಮಾಹಿತಿ ಇದ್ದರೂ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದರು. ಸುಹಾಸ್ ಕಾರಿನಲ್ಲಿ ಆಯುಧ ಇಟ್ಟುಕೊಳ್ಳದಂತೆ ನೋಡಿಕೊಂಡಿದ್ದಾರೆ. ಪದೇ ಪದೇ ಪೊಲೀಸರು ಅವನ ವಾಹನವನ್ನು ಚೆಕ್ ಮಾಡಿದ್ದಾರೆ. ಮಾರಕಾಸ್ತ್ರಗಳು ಅವನ ರಕ್ಷಣೆಗೆ ಇದ್ದರೆ ಸುಹಾಸ್ ಉಳಿಯುತ್ತಿದ್ದ. ರಕ್ಷಣೆ ಕೊಡದೇ ದ್ವೇಷ ಕಾರಣ ಎಂದರೆ, ಇದೆಲ್ಲಾ ಪೊಲೀಸರಿಗೆ ಮೊದಲೇ ಗೊತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ. ಅಥವಾ ಪೊಲೀಸರು ಶಾಮೀಲು ಆಗಿದ್ದಾರ ಎಂಬ ಪ್ರಶ್ನೆ ಎದ್ದಿದೆ.
ಇನ್ನು ಮೇ 1 ಗುರುವಾರ ರಾತ್ರಿ ಸುಹಾಸ್ ಶೆಟ್ಟಿ ಕಾರಿನಲ್ಲಿ ಬಜಪೆ ಕಡೆ ಹೋಗುತ್ತಿದ್ದಾಗ, ಕಿನ್ನಿಪದವು ಜಂಕ್ಷನ್ ಬಳಿ 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ನಡೆದಿದೆ. ಆದರೆ ಕೊಲೆಗೆ ಸ್ಕೆಚ್ ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಗೆ ಮೊದಲೇ ಮಾಹಿತಿ ಇತ್ತು, ಸ್ವತಃ ಸುಹಾಸ್ ಶೆಟ್ಟಿಗೂ ಪೊಲೀಸ್ ಇಲಾಖೆ ಹೇಳಿತ್ತು, ಇದು ಪೊಲೀಸರ ವೈಫಲ್ಯ ಎಂದು ಶಾಸಕ ಹರೀಶ್ ಪೂಂಜ ಕೂಡಾ ಹೇಳಿದ್ದಾರೆ.
ಸುರತ್ಕಲ್ನಲ್ಲಿ 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಎ1 ಆರೋಪಿ ಸುಹಾಸ್ ಶೆಟ್ಟಿ. ಹೌದು ನೆಟ್ಟಾರು ಪ್ರವೀಣ್ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್ನಲ್ಲಿ ಫಾಝಿಲ್ ಎಂಬಾತನ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಕರಣದ ಎ1 ಆರೋಪಿಯಾಗಿ ಜೈಲು ಸೇರಿದ್ದ. ಕಳೆದ ಮಾರ್ಚ್ ನಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಸುಹಾಸ್ ಶೆಟ್ಟಿ ಹೊರ ಬಂದಿದ್ದ. ಹೀಗಾಗಿ ಸುಹಾಸ್ ಶೆಟ್ಟಿ ಹತ್ಯೆ ದ್ವೇಷದ ಕೊಲೆಯಾಗಿರಬಹುದು ಎಂದೂ ಅಂದಾಜಿಸಲಾಗಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.