FactCheck:ಪಾಕಿಸ್ತಾನದ ಮೇಲೆ ರಣಭೀ#ಕರ ದಾಳಿ ಮಾಡಿದ ಇಂಡಿಯಾನ್ ಆರ್ಮಿ, ರೊಚ್ಚಿಗೆದ್ದ ಜಮೀರ್ ಅಹ್ಮದ್ ಅಸಲಿಯತ್ತು ಇಲ್ಲಿದೆ
May 7, 2025, 20:10 IST
|

ಭಾರತ-ಪಾಕಿಸ್ತಾನ ನಡುವೆ ಯುದ್ಧದ ಪರಿಸ್ಥಿತಿ ಎದುರಾಗಿದೆ. ಏನಾಗುತ್ತೋ ಏನೋ ಎಂಬ ಚಿಂತೆ ಇಡೀ ದೇಶದ ಜನತೆಗೆ ತಲೆದೋರಿದೆ. ಈ ಮಧ್ಯೆ ಮೇ 5 ರಂದು ಗೃಹಸಚಿವಾಲಯ ಮೇ 7 ರಂದು ಮಾಕ್ ಡ್ರಿಲ್ ನಡೆಸುವುದಾಗಿ ಇಡೀ ದೇಶಕ್ಕೆ ಸೂಚನೆ ನೀಡಿದೆ. ರಾಜಕೀಯ ನಾಯಕರು ಸೇರಿ ಬಹುತೇಕ ಎಲ್ಲರೂ ಭಾರತಕ್ಕೆ ಅನ್ಯಾಯ ಮಾಡಿದ ಪಾಪಿ ಉಗ್ರರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ವಿರುದ್ಧ ಕರ್ನಾಟಕದ ಸಚಿವ ಜಮೀರ್ ಅಹ್ಮದ್ ಖಾನ್, ಅಗತ್ಯ ಇದ್ದರೆ ನಾನೇ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಅದೇ ಮಾತನ್ನು ಇಂದು ಮತ್ತೆ ಪುನರುಚ್ಚರಿಸಿದ್ದಾರೆ.ಪಾಕಿಸ್ತಾನ ಯಾವಾಗಲೂ ಭಾರತದ ಶತ್ರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ ನಾನು ಯುದ್ಧಕ್ಕೆ ಹೋಗಲು ಸಿದ್ಧ" ಎಂದು ಹೇಳಿದ್ದರು. ನಾವು ಭಾರತೀಯರು, ನಾವು ಹಿಂದೂಸ್ತಾನಿಗಳು. ಪಾಕಿಸ್ತಾನ ನಮ್ಮೊಂದಿಗೆ ಎಂದಿಗೂ ಯಾವುದೇ ಸಂಬಂಧವನ್ನು ಹೊಂದಿರಲಿಲ್ಲ ಎಂದಿದ್ದಾರೆ.
ಪಾಕಿಸ್ತಾನ ಯಾವಾಗಲೂ ನಮ್ಮ ಶತ್ರು. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಿದರೆ, ನಾನು ಯುದ್ಧಕ್ಕಾಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧನಿದ್ದೇನೆ ಎಂದು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ನಾನು ಯುದ್ಧಕ್ಕಾಗಿ ಪಾಕಿಸ್ತಾನಕ್ಕೆ ಹೋಗುತ್ತೇನೆ. ಮೋದಿ, ಶಾ ನನಗೆ ಆತ್ಮಹತ್ಯಾ ಬಾಂಬ್ ನೀಡಲಿ, ನಾನು ಅದನ್ನು ನನ್ನ ದೇಹಕ್ಕೆ ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಿ ಅವರ ಮೇಲೆ ದಾಳಿ ಮಾಡುತ್ತೇನೆ ಎಂದು ಅವರು ಹೇಳಿದ್ದರು, ಈ ಹೇಳಿಕೆ ಕೂಡಾ ಭಾರೀ ವೈರಲ್ ಆಗಿತ್ತು. ಇದೀಗ ಮತ್ತೆ ಅದೇ ಮಾತನ್ನ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಭಾರತ ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಕವಿದಿರುವ ವಿಚಾರದ ಬಗ್ಗೆ ಮಾತನಾಡಿದ್ದಾಗ ಕೇಂದ್ರ ಸರಕಾರ ಈ ವಿಚಾರದಲ್ಲಿ ಏನು ತೀರ್ಮಾನ ಕೈಗೊಳ್ಳುತ್ತೋ ಕೈಗೊಳ್ಳಲಿ. ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ನಿಮ್ಮ ಜೊತೆ ನಾವಿದ್ದೀವಿ, ನೀವು ಏನಾದ್ರೂ ತೀರ್ಮಾನ ಕೈಗೊಳ್ಳಿ ಅಂತ ನಾವು ಹೇಳಿದ್ದೇವೆ. ಕೇಂದ್ರ ಸರಕಾರ ಏನು ತೀರ್ಮಾನ ಕೈಗೊಳ್ಳುತ್ತದೋ ಕೈಗೊಳ್ಳಲಿ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.