ಪುನೀತ್ ಆತ್ಮದ ಜೊತೆ ಖ್ಯಾ ತ ಗುರೂಜಿ ಮಾತುಕತೆ; ಅಭಿಮಾನಿಗಳಿಗೆ ಅಪ್ಪು ಸಂದೇಶ

 | 
Ga

ಯಾರ ಜೊತೆ ಜಗಳ ಆಡದ, ಯಾರಿಗೂ ನೋವನ್ನು ಮಾಡದ ಪುನೀತ್ ನಮ್ಮೊಂದಿಗಿಲ್ಲದೆ 3 ವರ್ಷ ಕಳೆದೆ ಹೋಯಿತು. ಆದರೂ, ಅಪ್ಪು ನೆನಪುಗಳನ್ನು ಅವರ ಅಭಿಮಾನಿಗಳು ಇನ್ನು ಮರೆತಿಲ್ಲ. ಪುನೀತ್ ರಾಜ್‌ಕುಮಾರ್ ದಿಢೀರ್ ಅಗಲಿಕೆ ಅಭಿಮಾನಿಗಳಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಅಷ್ಟೊಂದು ಫಿಟ್ ಆಗಿದ್ದ ಪುನೀತ್ ರಾಜ್‌ಕುಮಾರ್ ಅಗಲುವುದಕ್ಕೆ ಹೇಗೆ ಸಾಧ್ಯ ಅನ್ನುವ ಗೊಂದಲದಲ್ಲಿ ಇದ್ದರು.

ಆಧ್ಯಾತ್ಮೀಕ ಗುರುಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಡಾ. ಶ್ರೀ ರಾಮಚಂದ್ರ ಗುರೂಜಿ ಇತ್ತೀಚೆಗೆ ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಆತ್ಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ವೇಳೆ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಆತ್ಮದ ಜೊತೆ ಸಂಭಾಷಣೆ ನಡೆದಿದ್ದಾಗಿ ಹೇಳಿಕೊಂಡಿದ್ದಾರೆ.

ಆರ್‌ಜೆ ರಾಜೇಶ್ ನಡೆಸಿಕೊಡುವ ಈ ಸಂದರ್ಶನದಲ್ಲಿ ಡಾ. ಶ್ರೀ ರಾಮಚಂದ್ರ ಗುರೂಜಿ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಪ್ಪು ಆತ್ಮಕ್ಕೆ ಕೇಳಿದ ಮೂರು ಪ್ರಶ್ನೆಗಳ ಬಗ್ಗೆ ರಿವೀಲ್ ಮಾಡಿದ್ದಾರೆ. ಅದಕ್ಕೆ ಅಪ್ಪು ಆತ್ಮದಿಂದ ಉತ್ತರ ಕೂಡ ಸಿಕ್ಕಿದೆ ಎಂದೂ ಹೇಳಿಕೊಂಡಿದ್ದಾರೆ. ಈ ಸಂದರ್ಶನದ ಕೆಲವು ತುಣುಕುಗಳು ಹೀಗಿವೆ.

ಆತ್ಮ ಸಂಭಾಷಣೆ ಮಾಡುವುದಕ್ಕೆ ಸಾಧ್ಯ. ಅದೊಂದು ಟೆಕ್ನಾಲಜಿ. ಆಧ್ಯಾತ್ಮದಲ್ಲಿ ಹಿಂದಿನ ಜನ್ಮಗಳನ್ನು ತಿಳಿದುಕೊಳ್ಳುವುದಕ್ಕೆ ಹೇಗೆ ಟೆಕ್ನಾಲಜಿ ಇದೆಯೋ ಹಾಗೇ ಸತ್ತವರ ಜೊತೆ ಸಂಭಾಷಣೆ ಮಾಡುವಂತಹದ್ದೂ ಇದೆ. ಅಪ್ಪು ಆತ್ಮದ ಜೊತೆ ಸಂಭಾಷಣೆಯನ್ನು ನಾನು ಪಬ್ಲಿಕ್ ಪ್ಲಾಟ್‌ಫಾರ್ಮ್‌ನಲ್ಲಿ ಮಾಡಿಲ್ಲ. ನನ್ನ ವೈಯಕ್ತಿಕ ಮಾಹಿತಿಗೋಸ್ಕರ ನಾನು ಮಾಡಿದ್ದೆ. ಯಾಕಂದ್ರೆ ಅವರ ಅಭಿಮಾನಿಗಳು ಕೋಟಿ ಲೆಕ್ಕದಲ್ಲಿ ಇದ್ದಾರೆ.ಎಂದು ಡಾ. ಶ್ರೀ ರಾಮಚಂದ್ರ ಗುರೂಜಿ ಹೇಳಿಕೊಂಡಿದ್ದಾರೆ.

ನಾನು ಕೇಳಿದ ಪ್ರಶ್ನೆ ಇಷ್ಟು. ಅಪ್ಪು ಅವರೇ ನಿಮ್ಮ ಸಾವಿನ ಬಗ್ಗೆ ಅನೇಕ ಅಪೋಹಗಳಿವೆ ಅದು ನಿಜನಾ? ಅದಕ್ಕೆ ಅವರು ಇಲ್ಲ ನಾನು ಹೃದಯ ಸಂಬಂಧಿ ಸಮಸ್ಯೆಯಿಂದಲೇ ಸತ್ತಿದ್ದು ಅಂತ ಮೊದಲು ಕ್ಲಿಯರ್ ಮಾಡಿದರು. ಎರಡನೆಯದ್ದು ಹೇಳಿದ್ದು, ಈಗ ಎಲ್ಲಿದ್ದೀರಿ ಅಂತ? ಅದಕ್ಕೆ ಅವರಿಂದ ಬಂದ ಉತ್ತರ ನಾನು ಅಪ್ಪ ಅಮ್ಮನ ಹುಡುಕಾಟದಲ್ಲಿ ಇದ್ದೇನೆ. ಹುಟ್ಟಿದರೆ  ಮಗಳ ಹೊಟ್ಟೆಯಲ್ಲಿ ಹುಟ್ಟಿ ಬರುವೆ ಎಂದು ಅಪ್ಪು ಆತ್ಮ ಹೇಳಿತ್ತು ಎಂದು ಡಾ. ಶ್ರೀ ರಾಮಚಂದ್ರ ಗುರೂಜಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.