ಬಹು ಬೇಡಿಕೆಯ ಪ್ರಕಾಶ್ ಪರಲೋ.ಕ; ಕರುನಾಡಿಗೆ ನುಂಗಲಾರದ ನಷ್ಟ

 | 
Uu

ಬದುಕು ಕ್ಷಣಿಕವಾದದ್ದು ಇಂದು ಇದ್ದವರು ನಾಳೆ ಇರುತ್ತಾರೆ ಎಂಬ ಯಾವ ಗ್ಯಾರಂಟಿಯೂ ಇಲ್ಲ. ಹೌದು ಇತ್ತೀಚಿಗೆ ಚಿತ್ರರಂಗದ ಹಲವಾರು ಕಲಾವಿದರು ಇಹಲೋಕ ತ್ಯಜಿಸಿದ್ದಾರೆ. ಆದರಲ್ಲೂ ಅತಿ ಚಿಕ್ಕ ವಯಸ್ಸಿನಲ್ಲೇ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ, ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಹೀಗೆ ಹಲವಾರು ಜನ ನಮ್ಮನ್ನು ಅಗಲಿದ್ದಾರೆ.

ಇದೀಗ ಅವರ ಸಾಲಿನಲ್ಲಿ ನಟ ಪ್ರಕಾಶ್ ಕೂಡ ಸೇರಿದ್ದಾರೆ. ಹೌದು ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅವರು ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಕನ್ನಡದ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಪ್ರಕಾಶ್‌ ಹೆಗ್ಗೋಡು ಅವರು ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೇ ಖ್ಯಾತಿಗಳಿಸಿದ್ದರು. ಸಿನಿಮಾ, ರಂಗಭೂಮಿಗಳಲ್ಲಿ ಸಕ್ರಿಯರಾಗಿದ್ದ ಅವರು ಪರಿಸರ ಹೋರಾಟದಲ್ಲಿಯೂ ಮುಂಚೂಣಿಯಲ್ಲಿದ್ದರು. ಯಶ್‌ ಅವರ ಜತೆ ರಾಜಾಹುಲಿ, ಶಿವ ರಾಜ್‌ಕುಮಾರ್‌ ಅವರೊಂದಿಗೆ ಸಂತ, ಭಾಗ್ಯದ ಬಳೆಗಾರ, ಉಪೇಂದ್ರ ಅವರೊಂದಿಗೆ ಕಲ್ಪನಾ 2 ಜತೆಗೆ ವೀರು, ಮಾಡ್ರರ್ನ್‌ ಮಹಾಭಾರತ ಮುಂತಾದ ಸಿನಿಮಾಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಮಿಂಚಿದ್ದರು ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಪ್ರಕಾಶ್ ಹೆಗ್ಗೋಡು ಅವರು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರು. ರಂಗ ಭೂಮಿಯಲ್ಲಿ ಆಸಕ್ತಿ ಹೊಂದಿದ್ದ ಕಾರಣ ಅವರು ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ಅನುರೂಪ ಅಭಿನಯ ತೋರಿ ಹಲವು ಅಭಿಮಾನಿಗಳನ್ನು ಹೊಂದಿರುವ ಅವರ ಅಂತಿಮ ದರ್ಶನಕ್ಕೆ ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ. ಆತ್ಮೀಯರು, ರಂಗಕರ್ಮಿಗಳು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು ಎಂದು ಕುಟಂಬದ ಸದಸ್ಯರು ಹೇಳಿದ್ದಾರೆ. ಇನ್ನು ಇವರ ಸಾವಿಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.