ಅಯೋಧ್ಯೆಯಲ್ಲಿ ಸೋನಿಯಾ ಗಾಂಧಿ ಖರ್ಗೆ ಖಡಕ್ ಎಂಟ್ರಿ ಇರುತ್ತಾ, ಇಡೀ ದೇಶವೇ ರಾಮನ ಕಡೆ
![B](https://powerfullkarunadu.tech/static/c1e/client/98456/uploaded/b904d2c3c79dd03cc14d1f3b50c254a8.jpg?width=981&height=515&resizemode=4)
ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ನಡೆಯಲಿರುವ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದೆ ಸರಿದ ಬೆನ್ನಲ್ಲೇ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪಕ್ಷದ ನಿರ್ಧಾರಕ್ಕೆ ಒಮ್ಮತ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ .
ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಹೇಳಿದ್ದಾರೆ.ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.
ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.