ಬಡವರಿಗೆ ಅತೀ ಕಡೆಮೆ ಬೆಲೆಯಲ್ಲಿ ಬಂಗಾರ ನೀಡುತ್ತಿರುವ ತನಿಷಾ; ಕನ್ನಡಿಗರು ಫಿದಾ

 | 
Yy

ನಟಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ಬೆಂಗಳೂರಿನ ವಿಜಯನಗರದಲ್ಲಿ ‘ಕುಪ್ಪಂಡ ಜ್ಯುವೆಲರೀಸ್’ ಎಂಬ ಹೆಸರಿನಲ್ಲಿ ತಮ್ಮದೇ ಹೊಸ ಆಭರಣ ಮಳಿಗೆಯನ್ನು ಉದ್ಘಾರಿಸಿದರು. ಆಭರಣ ಮಳಿಗೆಯಲ್ಲಿ ಚಿನ್ನ, ಬೆಳ್ಳಿ ಮತ್ತು ಕೃತಕ ಆಭರಣಗಳು ಸೇರಿದಂತೆ ವಿವಿಧ ರೀತಿಯ ಆಭರಣಗಳು ಲಭ್ಯವಿವೆ.

ಉದ್ಘಾಟನಾ ಸಮಾರಂಭದಲ್ಲಿ ಬಿಗ್ ಬಾಸ್ ಸ್ಪರ್ಧಿಗಳು ಮತ್ತು ತನಿಷಾ ಕುಪ್ಪಂಡ ಅವರ ಕುಟುಂಬದವರು ಭಾಗವಹಿಸಿದ್ದರು. ಬಿಗ್ ಬಾಸ್ 10 ಖ್ಯಾತಿಯ ತನಿಷಾ ಕುಪ್ಪಂಡ ಅವರು ಯಶಸ್ವಿ ನಟಿ ಎಂದು ಎಲ್ಲರಿಗೂ ಗೊತ್ತು. ಈಗಾಗಲೇ ಇವರು ಹಲವು ಧಾರಾವಾಹಿಗಳಲ್ಲಿ ನಟಿಸಿ ನಮ್ಮ ನಟನಾ ಸಾಮರ್ಥ್ಯವನ್ನು ತೋರಿದ್ದಾರೆ. 

ಇದರ ಜೊತೆಗೆ ಇವರು ಉದ್ಯಮಿಯೂ ಹೌದು. ಇವರು ಲಾಭದಾಯಕ ಹೋಟೆಲ್ ವ್ಯವಹಾರದಲ್ಲಿ ಯಶಸ್ಸು ಕಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಅಪ್ಪುಸ್ 93 ಕಿಚನ್ ಎಂಬ ಹೆಸರಿನ ಹೋಟೆಲ್ ಅನ್ನು ತನಿಷಾ ಕುಪ್ಪಂಡ ನಡೆಸುತ್ತಿದ್ದಾರೆ. ಈ ಹೋಟೆಲ್ ರುಚಿಕರವಾದ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳಿಗೆ ಹೆಸರುವಾಸಿಯಾಗಿದೆ.

ತನಿಷಾ ಅವರು ಮೊದಲು ಬಣ್ಣ ಹಚ್ಚಿದ್ದು ಕಲರ್ಸ್ ಕನ್ನಡದ ಮಂಗಳಗೌರಿ ಮದುವೆ ಧಾರಾವಾಹಿಯಲ್ಲಿ ನಂತರ ಸ್ಟಾರ್ ಸುವರ್ಣ ಚಾನೆಲ್ ನಲ್ಲಿ ಪ್ರಸಾರ ಆದ ಇಂತಿ ನಿಮ್ಮ ಆಶಾ, ಸತ್ಯ ಶಿವಂ ಸುಂದರಂ, ವಾರಸ್ದಾರ, ಸರಯೂ, ಸಾಕ್ಷಿ, ಪ್ರೀತಿ ಎಂದರೇನು ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ಇದರ ಜೊತೆಗೆ ಬೇರೆ ಭಾಷೆಗಳ ಧಾರಾವಾಹಿಗಳಲ್ಲಿ ಸಹ ಇವರು ನಟಿಸಿದ್ದಾರೆ. ಇದೀಗ ಚಿನ್ನಾಭರಣ  ತೋರಿಸಲು ಹೊಸ ಯು ಟ್ಯೂಬ್ ಕೂಡಾ ಶುರು ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.