ತಪ್ಪು ಮಾಡಿದವರು ಜೈಲಿಗೆ ಹೋಗಬೇಕು ಅಲ್ವಾ; ಸೂಪರ್ ಸ್ಟಾರ್ ರಕ್ಷಕ್ ಬಿರುಸಿನ ಮಾತು

 | 
He

ನಟ ದರ್ಶನ್  ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಅವರು ಕಷ್ಟಪಡುತ್ತಿರುವುದನ್ನು ನೋಡಿ ಫ್ಯಾನ್ಸ್ ಸಾಕಷ್ಟು ಬೇಸರಕ್ಕೆ ಒಳಗಾಗಿದ್ದಾರೆ. ಅವರ ಆಪ್ತರಿಗೆ ಹಾಗೂ ಫ್ಯಾನ್ಸ್​ಗೆ ಇದು ನುಂಗಲಾರದ ತುತ್ತಾಗಿದೆ. ಈಗ ರಕ್ಷಕ್ ಬುಲೆಟ್ ಅವರು ಈ ಬಗ್ಗೆ ಪರೋಕ್ಷವಾಗಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

 ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದಿರುವ ಅವರು ಬರ್ತ್​ಡೇ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ. ಜೂನ್ 21 ಅವರ ಜನ್ಮದಿನವಾಗಿತ್ತು. ಅಂದು ಅವರ ಸಿನಿಮಾ ಘೋಷಣೆ ಆಗೋ ಸಾಧ್ಯತೆ ಇತ್ತು ಆದರೆ ಅದಕ್ಕೆಲ್ಲ ಬ್ರೇಕ್ ಹಾಕಿ ಸಂತೋಷ ಪಡುವ ಸಮಯವಲ್ಲ ಎಂದು ಹೇಳಿ ದರ್ಶನ್ ಮೇಲಿನ ಅಭಿಮಾನ ಮೆರೆದಿದ್ದಾರೆ.

ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ, ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. 

ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಬುಲೆಟ್ ಪ್ರಕಾಶ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಈ ಕಾರಣಕ್ಕೆ ಬುಲೆಟ್ ಪ್ರಕಾಶ್ ಮಗ ಎನ್ನುವ ಕಾರಣಕ್ಕೆ ದರ್ಶನ್ ಹಾಗೂ ರಕ್ಷಕ್ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ದರ್ಶನ್ ಡಿ ಬಾಸ್ ಆದರೆ, ನಾನು ಆರ್ ಬಾಸ್ ಎಂದು ಅವರು ಕರೆದುಕೊಂಡಿದ್ದಾರೆ. 

ಬಿಗ್ ಬಾಸ್​ಗೆ ಹೋದ ತಿಂಗಳ ಒಳಗೆ ಅವರು ಎಲಿಮಿನೇಟ್ ಆಗಿದ್ದರು. ಇದೀಗ ತಮ್ಮ ಹೇಳಿಕೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.