ಕಾಟೇರನ ಮತ್ತೊಂದು ಮು ಖ ಹೊರಹಾಕಿದ ಉಮಾಪತಿ ಗೌಡ;

 | 
Hu

ತಗಡೆ ಎನ್ನುತ್ತಾ ಶುರುವಾದ ದರ್ಶನ್ ಮತ್ತು ನಿರ್ಮಾಪಕ. ಉಮಾಪತಿಯ ತಗಾದೆ ಈಗ ಮತ್ತೊಂದು ಹೊಸ ರೂಪ ಪಡೆದಿದೆ. ಹೌದು ಕನ್ನಡದ ಖಾಸಗಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಪಬ್ಲಿಕ್ ಲೈಫ್‌ಗೆ ಬಂದ್ಮೇಲೆ ಕಾಲು ಎಳೆಯೋರು ಇರಬೇಕು. ಬೆನ್ನು ತಟ್ಟೋರು ಇರಬೇಕು. ನಮ್ಮ ಬೆರಳು ಇನ್ನೊಬ್ಬರ ಕಣ್ಣಿಗೆ ಚುಚ್ಚಿದರೆ ನೋವಾಗುತ್ತೆ. 

ಹಾಗೇ ನಮ್ಮ ಬೆರಳು ನಮ್ಮ ಕಣ್ಣಿಗೆ ಚುಚ್ಚಿದರೂ ನಮಗೆ ನೋವಾಗುತ್ತದೆ ಅಷ್ಟೇ ನಾನು ಹೇಳೋದು ಎಂದು ಹೇಳಿದ್ದಾರೆ. ಪೊಲೀಸ್​ ಇಲಾಖೆ ಬಗ್ಗೆ ಜನಗಳಿಗೆ ನಂಬಿಕೆ ಬಂದಿದೆ. ದೊಡ್ಡವರಿಗೂ, ಸಣ್ಣವರಿಗೆ ಒಂದೇ ನ್ಯಾಯ. ಮಾರುತಿ ಕಾರಲ್ಲಿ ಹೋಗುವವರಿಗೆ, ಲ್ಯಾಂಬೋರ್ಗಿನಿಯಲ್ಲಿ ಹೋಗುವವರಿಗೆ ಒಂದೇ ನ್ಯಾಯ ಇರಬೇಕು ಎಂದಿದ್ದಾರೆ ಉಮಾಪತಿ ಶ್ರೀನಿವಾಸ್.

ನಾನು ಮೊದಲು ದರ್ಶನ್ ಗುಂಪಲ್ಲಿ ಇದ್ದೆ. ದೇವರು ನನ್ನನ್ನು ಹೊರಗೆ ಕರೆದುಕೊಂಡು ಬಂದ. ಗಿಡವಾಗಿ ಬಗ್ಗದು ಮರವಾಗಿ ಬಗ್ಗೋದಿಲ್ಲ. ತಪ್ಪು ಮಾಡಿದಾಗ ತಿದ್ದಿಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು ಎಂದಿದ್ದಾರೆ ಉಮಾಪತಿ ಶ್ರೀನಿವಾಸ್. ದರ್ಶನ್ ಅವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.

ಇವತ್ತು ನಾನು ಹಾಕಿದ ಪೋಸ್ಟ್ ಯಾರಿಗೋ ಒಬ್ಬ ವ್ಯಕ್ತಿಗಾಗಿ ಹಾಕಿಲ್ಲ. ತಾಳ್ಮೆಯಿಂದ ಕಾದರೆ ಏನಾಗುತ್ತೆ? ಅನ್ನೋದಕ್ಕೆ ಈ ಪೋಸ್ಟ್ ಹಾಕಿದ್ದೆ. ಯಾವುದೋ ಒಬ್ಬ ವ್ಯಕ್ತಿಗೆ ಮುಟ್ಟಬೇಕು. ಒಬ್ಬ ವ್ಯಕ್ತಿ ಹಳ್ಳಕ್ಕೆ ಬಿದ್ದಿದ್ದಾನೆ. ಇನ್ನೂ ಯಾವಾಗಲೂ ಲ್ಯಾಂಬೋರ್ಗಿನಿ ಲ್ಯಾಂಬೋರ್ಗಿನಿ ಅಂತಾ ಹೇಳ್ತಾರೆ, ಆ ಲ್ಯಾಂಬೋರ್ಗಿನಿ ಬುಕ್ ಮಾಡೋಕೆ ಅಡ್ವಾನ್ಸ್ ಕೊಟ್ಟವನೇ ನಾನು, ಹಾಗಂತ ನಾನು ಪುಕ್ಸಟ್ಟೆ ಕೊಟ್ಟಿಲ್ಲ, ಅವರು ಮಾಡುವ ಕೆಲಸಕ್ಕಾಗಿ ಕೊಟ್ಟಿದ್ದೇನೆ, ನಾನು ದುಡಿದು ಹಣ ಸಂಪಾದನೆ ಮಾಡಿ ಆಮೇಲೆ ಸಿನಿಮಾಗಾಗಿ ದುಡ್ಡು ನೀಡಿದ್ದೇನೆ ಎಂದು ಸ್ಪಷ್ಚಪಡಿಸಿದ್ದಾರೆ. ( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.