ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹೊಡೆದ ಯುವಕರು; ಇದು ಮುಸ್ಲಿಮ್ ಯುವಕರದ್ದೆ ತಪ್ಪು ಎಂದ ಪಕ್ಕದ ಅಂಗಡಿಯ ಮುಸ್ಲಿಂ ಮಾಲೀಕ

 | 
Jejje

ಇಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಬೇಕಾದ್ದನ್ನು ಹಾಡಬಹುದು. ತಿನ್ನಬಹುದು ಮಾತಾಡಬಹುದು ಆದ್ರೆ ಇಲ್ಲೊಂದು ಮನ ಕಲಕುವ ಘಟನೆ ನಡೆದಿದೆ. ಹೌದು ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದನ್ನುಪ್ರಶ್ನಿಸಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುಲೇಮಾನ್, ಶನವಾಜ್ ಮತ್ತು ರೋಹಿತ್ ಬಂಧಿತರು. 

ಉಳಿದವರಿಗಾಗಿ ಶೋಧ ಮುಂದುವರೆದಿದೆ. ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮುಖೇಶ್ ಎಂಬುವರು ಮೊಬೈಲ್ ಬಿಡಿ ಭಾಗಗಳ ಅಂಗಡಿ ಇಟ್ಟುಕೊಂಡಿದ್ದಾರೆ. ಇಲ್ಲಿನ ಪ್ರಾರ್ಥನಾ ಮಂದಿರದ 200 ಮೀಟರ್ ದೂರದಲ್ಲಿ ಮುಖೇಶ್ ಅವರ ಅಂಗಡಿ ಇದೆ. ನಿನ್ನೆ ಸಂಜೆ 7.30ರ ಸುಮಾರಿನಲ್ಲಿ ತಮ್ಮ ಅಂಗಡಿಯಲ್ಲಿ ಹಿಂದಿ ಭಜನೆ ಹಾಡು ಹಾಕಿದ್ದರು. ಇದರಿಂದ ಕೋಪಗೊಂಡ ಅನ್ಯಕೋಮಿನ ಆರೇಳು ಮಂದಿಯ ಗುಂಪು ಏಕಾಏಕಿ ಅಂಗಡಿ ಬಳಿ ಹೋಗಿ ನಿಮ್ಮ ಅಂಗಡಿಯಲ್ಲಿ ಹಾಕಿರುವ ಹಾಡಿನಿಂದ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ ಹಾಡನ್ನು ನಿಲ್ಲಿಸುವಂತೆ ಹೇಳಿ ಜಗಳವಾಡಿದ್ದಾರೆ.

ಮಾತಿಗೆ ಮಾತು ಬೆಳೆದಾಗ ಗಲಾಟೆ ವಿಕೋಪಕ್ಕೆ ತಿರುಗಿ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆಳೆದು ಕೈ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಗಂಪು ಪರಾರಿಯಾಗಿದೆ. ಘಟನೆಯನ್ನು ಖಂಡಿಸಿ ವರ್ತಕರು ಠಾಣೆ ಮುಂದೆ ಜಮಾಯಿಸಿ ಹಲ್ಲೆ ಮಾಡಿದ ಪುಂಡರನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದರು. ಕಳೆದ 15 ದಿನಗಳಿಂದಲೂ ಅಂಗಡಿ ಬಳಿ ಬಂದು ಕೆಲ ಪುಂಡರು ಕಿರುಕುಳ ನೀಡುತ್ತಿದ್ದಾರೆಂದು ವರ್ತಕರು ಆರೋಪಿಸಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಂಗಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಹಲ್ಲೆ ನಡೆಸಿದ ಮೂವರನ್ನು ಬಂಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಇನ್ನು ಪಾರ್ಥನೆ ನಡೆಸುತ್ತಿದ್ದ ಮೌಲ್ವಿಗಳು ತಮಗೆ ಅದರಿಂದ ಯಾವುದೇ ತೊಂದರೆ ಇರಲಿಲ್ಲ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.